ದೀನಗಿಂತ ದೇವ ಬಡವ - ದಿನಕರ ದೇಸಾಯಿ
ಹರಿಗೆ ಎಂದು ಗುಡಿಯನೊಂದ ಕಟ್ಟುತಿರುವೆಯಾ ?
ಹರಿಯ ಒಲುಮೆ ಪಡೆದು ಪುಣ್ಯ ಗಳಿಸುತಿರುವೆಯಾ ?
ಹುಚ್ಚ ! ನೀನು ಹಳ್ಳಿಗೋಡು
ದೀನ ಜನರ ಪಾಡ ನೊಡು
ಇರಲು ಗುಡಿಯು ಇಲ್ಲವಲ್ಲ
ಹೊಟ್ಟೆ ತುಂಬ ಅನ್ನವಿಲ್ಲ !
ಹರಿಗೆ ಎಂದು ಗುಡಿಯನೊಂದ ಕಟ್ಟುತಿರುವೆಯಾ ?
ದೀನಗೊಂದು ಗೂಡು ಸಾಕು
ದೇವಗೊಂದು ವಿಶ್ವ ಬೇಕು
ಮಣ್ಣ ಹುಲ್ಲ ಸಣ್ಣ ಗೂಡು
ಬಡವಗದುವೆ ಸಿರಿಯ ಬೀಡು
ಹರಿಗೆ ಎಂದು ಗುಡಿಯನೊಂದ ಕಟ್ಟುತಿರುವೆಯಾ ?
ಜಗಕೆ ಗೋಡೆ ಹಾಕಿ ಗುಡಿಯ ಕಟ್ಟಬಲ್ಲೆಯಾ ?
ಹರಿಗೆ ಎಂದು ಗುಡಿಯನೊಂದ ಕಟ್ಟುತಿರುವೆಯಾ ?
ಹರಿಯ ವಿಶ್ವರೂಪವನ್ನು ಮರೆತುಬಿಟ್ಟೆಯಾ ?
ದೀನಗಿಂತ ದೇವ ಬಡವನೆಂದು ಬಗೆದೆಯಾ ?
If you can't see the Kannada font above, you can see an image of the poem below.

3 comments:
Beautiful!! Really beautiful!! Thanks for the poem :)
My pleaseure.
ತುಂಬಾ ಚೆನ್ನಾಗಿದೆ ದಿನಕರ ದೇಸಾಯಿಯವರ ಚುಟುಕಗಳನ್ನು ಅಂತರ್ಜಾಲದಲ್ಲಿ ಹುಡುಕುತ್ತಿದ್ದಾಗ ನಿಮ್ಮ ಈ ಪುಟ ಸಿಕ್ಕಿತು ಕವಿತೆ ತುಂಬಾ ಖುಷಿ ಕೊಟ್ಟಿತು ನಿಮ್ಮ ಈ ಪ್ರಯತ್ನಕ್ಕೆ ನನ್ನ ಹ್ರುತ್ಪೂರ್ವಕ ಅಭಿನಂದನೆಗಳು
ಸಂತೋಷ
Post a Comment